ಬಳಕೆದಾರೆ:Kishore Kumar Rai/ಎನ್ನ ಕಲ್ಪುನ ಕಳ6

ವಿಕಿಪೀಡಿಯರ್ದ್


ಮಹಾತ್ಮ ಗಾಂಧಿ[ಸಂಪೊಲಿಪುಲೆ]

ಜೀವನ[ಸಂಪೊಲಿಪುಲೆ]

  • ನಂತರ ಪಟೇಲರು, ಹೆ೦ಡತಿ ಝವೇರಬಾರೊಂದಿಗೆ, ಅವರಿಗೆ ಚಿಕ್ಕವಯಸ್ಸಿನಲ್ಲಿಯೇ ಮದುವೆಯಾಗಿತ್ತು, ಸಂಸಾರ ಹೂಡಿದರು. ಅವರಿಗೆ ಇಬ್ಬರು ಮಕ್ಕಳಾದರು. ೧೯೦೪ರಲ್ಲಿ ಮಣಿ ಎಂಬ ಮಗಳು ಮತ್ತು ೧೯೦೬ರಲ್ಲಿ ದಹ್ಯಾ ಎಂಬ ಮಗ. ಬ್ಯುಬೋನಿಕ್ ಪ್ಲೇಗಿನಿಂದ ನರಳುತ್ತಿದ್ದ ಗೆಳೆಯನೊಬ್ಬನ ಆರೈಕೆ ಮಾಡುತ್ತ, ಪಟೇಲರು ಸ್ವತಃ ಆ ರೋಗಕ್ಕೆ ತುತ್ತಾದಾಗ, ತಮ್ಮ ಕುಟುಂಬವನ್ನು ಸುರಕ್ಷಿತ ಜಾಗಕ್ಕೆ ಕಳುಹಿಸಿ, ತಮ್ಮ ಮನೆಯನ್ನು ತ್ಯಜಿಸಿ, ನಡಿಯಾದಿನ ಮನೆಯೊಂದರಲ್ಲಿ ( ಪಾಳುಬಿದ್ದ ದೇವಸ್ಥಾನ ಎಂದೂ ಕೆಲವರು ಹೇಳುತ್ತಾರೆ) ಚೇತರಿಕೊಳ್ಳುವವರೆಗೆ ನೆಲೆಸಿದರು. ೧೯೦೯ರಲ್ಲಿ ಅವರ ಪತ್ನಿ ತೀರಿಕೊಂಡರು. ಪಟೇಲರ ಅಂತರ್ಮುಖಿ ಸ್ವಭಾವದಿಂದ ಅವರ ಹೆಂಡತಿಯ ಬಗ್ಯೆ ಸಾರ್ವಜನಿಕರಿಗೆ ತಿಳಿದಿರುವುದು ಅತ್ಯಲ್ಪ. ಪಟೇಲರು ಮರುಮದುವೆ ಮಾಡಿಕೊಳ್ಳಲಿಲ್ಲ.
  • ತಮ್ಮ ಕುಟುಂಬದ ಯೋಗಕ್ಷೇಮವನ್ನು ನೋಡಿಕೊಳ್ಳುತ್ತಲೇ , ಪಟೇಲರು ಇಂಗ್ಲೆಂಡ್ ಪ್ರಯಾಣಕ್ಕೆ ಹಣ ಶೇಖರಿಸತೊಡಗಿದರು. ಮುಂದೆ ಇಂಗ್ಲೆಂಡ್ ಪ್ರಯಾಣದ ಅವಕಾಶ ಸಿಕ್ಕಿದಾಗ ಆ ಅವಕಾಶವನ್ನು ತಮ್ಮ ಅಣ್ಣ, ವಿಠ್ಠಲಭಾಯಿ ,ಗೆ ಬಿಟ್ಟುಕೊಟ್ಟದ್ದಷ್ಟೇ ಅಲ್ಲ, ಅದಕ್ಕೆ ತಾವು ಕೂಡಿಟ್ಟಿದ್ದ ಹಣವನ್ನೂ ನೀಡಿದರು. ಅದು ಆದದ್ದು ಹೀಗೆ: ಪರದೇಶ ಪ್ರಯಾಣದ ತಿಕೀಟುಗಳು ಮತ್ತು ಪಾಸು “ವಿ.ಜೆ.ಪಟೇಲ್” ( ಅಣ್ಣ , ತಮ್ಮ ಇಬ್ಬರ ಇನಿಷಿಯಲ್ಲುಗಳು ವಿ.ಜೆ. ಎಂದೇ ಇತ್ತು) ಎಂಬ ಹೆಸರಿಗೆ ಅವರ ಅಣ್ಣನ ಮನೆಯ ವಿಳಾಸಕ್ಕೆ ತಲುಪಿತು. ಅಣ್ಣನಿಗೆ ತಮ್ಮ ಸ್ಥಾನವನ್ನು ಬಿಟ್ಟುಕೊಡಲು ಹಿಂದೆಗೆಯದ ವಲ್ಲಭಭಾಯ್ ಅಣ್ಣನ ಪ್ರವಾಸದ ಖರ್ಚನ್ನೂ ನಿಭಾಯಿಸಿದರು.[೧]

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗ[ಸಂಪೊಲಿಪುಲೆ]

  • ೧೯೧೮ರಲ್ಲಿ ತಮ್ಮ ಚೆನ್ನಾಗಿ ನಡೆಯುತ್ತಿದ್ದ ವಕೀಲಿ ವೃತ್ತಿ, ಅದರ ಘನತೆ,ಗೌರವ, ದೊಡ್ಡ ಮನೆ,ಸಂಪತ್ತು ಎಲ್ಲವನ್ನೂ ತ್ಯಜಿಸಿ ಸ್ವಾತಂತ್ರ್ಯ ಹೋರಾಟದ ಸರಳ ಜೀವನ, ಕಷ್ಟಕಾರ್ಪಣ್ಯ ಗಳಿಗೆ ತಮ್ಮನ್ನು ಅರ್ಪಿಸಿಕೊಂಡರು. ಮೊದಮೊದಲು ತಮ್ಮ ಮಿತ್ರರೊಂದಿಗೆ ಗಾಂಧಿಯವರ ರೀತಿನೀತಿಗಳನ್ನೂ, ರಾಜಕೀಯ ನೀತಿಗಳನ್ನೂ ಲೇವಡಿ ಮಾಡಿದ್ದರೂ, ಅನ್ನಿ ಬೆಸಂಟರ ಬಂಧನಕ್ಕೆ ಸಹಿಹಾಕಿದ ಪಿಟಿಷನ್ ಬದಲು ಸಾರ್ವಜನಿಕ ಪ್ರತಿಭಟನೆಮಾಡಬೇಕು ಎಂದು ಗಾಂಧಿ ಸೂಚಿಸಿದಾಗ, ಅವರ ಮನಃಪರಿವರ್ತನೆಯಾಯಿತು.
  • ಗಾಂಧಿಯವರ ಚಂಪಾರಣ್ಯದ ಸತ್ಯಾಗ್ರಹದ ನಂತರ ಪಟೇಲರಿಗೆ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಜಯ ಗಳಿಸಲು ಗಾಂಧಿ ಸಮರ್ಥರು ಎಂದು ನಂಬಿಕೆಯುಂಟಾಯಿತು. ಆ ಹಿರಿಯ ವ್ಯಕ್ತಿ ಭಾರತೀಯ ಮೌಲ್ಯಗಳಲ್ಲಿಟ್ಟಿದ್ದ ಶ್ರದ್ಧೆ, ಅತಿ ಸರಳ ಜೀವನ ಇವುಗಳಿಂದ ಆಕರ್ಷಿತರಾದ ಪಟೇಲರು ಗಾಂಧಿಯವರ ಆಪ್ತರಾದರು.
  • ಪಟೇಲರು ಕಾಂಗ್ರೆಸ್ ಪಕ್ಷ ಸೇರಿದ್ದು ೧೯೧೮ರ ನಂತರ. ಅವರು ಕಾರ್ಯದರ್ಶಿಯಾಗಿದ್ದ ಗುಜರಾತ್ ಸಭಾ ೧೯೨೦ ರಲ್ಲಿ ಗುಜರಾತ್ ಪ್ರದೇಶ ಕಾಂಗ್ರೆಸ್ ಕಮಿಟಿಯಾಗಿ ಬದಲಾಯಿತು. ಅದರ ಅಧ್ಯಕ್ಷರಾಗಿ ನೇಮಕಗೊಂಡ ಅವರು ೧೯೪೭ರವರೆಗೂ ಅಲ್ಲಿ ಸೇವೆ ಸಲ್ಲಿಸಿದರು.

ಖೇಡಾ, ಬರ್ಸಾಡ್ ಮತ್ತು ಬಾರ್ಡೋಲಿ ಸತ್ಯಾಗ್ರಹಗಳು[ಸಂಪೊಲಿಪುಲೆ]

  • ಖೇಡಾ ಹೋರಾಟದೊಂದಿಗೆ ಪಟೇಲರು ಸ್ವಾತಂತ್ರ್ಯ ಹೋರಾಟಕ್ಕೆ ಕಾಲಿಟ್ಟರು. ಗುಜರಾತಿನ ಖೇಡಾ ವಿಭಾಗವು ತೀವ್ರ ಕ್ಷಾಮದಿಂದ ತತ್ತರಿಸುತ್ತಿದ್ದು, ಅಲ್ಲಿಯ ರೈತರು ಕರ ವಿನಾಯಿತಿಗೆ ಬೇಡಿಕೆಯಿಟ್ಟರು. ಗಾಂಧಿ ಈ ಹೋರಾಟಕ್ಕೆ ಒಪ್ಪಿದ್ದರೂ ಸ್ವತಃ ಚಂಪಾರಣ್ಯದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರ ಕಾರಣ, ಈ ಹೋರಾಟದ ಮುಖಂಡತ್ವವನ್ನು ವಹಿಸಲು ಅಸಾಧ್ಯವಾಗಿತ್ತು.
  • ಖೇಡಾ ವಿಷಯಕ್ಕಾಗಿ ಪೂರ್ಣಾವಧಿ ಸಮಯವನ್ನು ಮೀಸಲಿಡುವ ಸ್ವಯಂಸೇವಕನಿಗಾಗಿ ಗಾಂಧಿ ಕೇಳಿದಾಗ ಪಟೇಲರು ಕೈಯೆತ್ತಿ , ಎದ್ದು ನಿಂತರು. ಹಿಂದೆ ವಕೀಲರೂ, ಗಾಂಧಿಯವರ ಅನುಯಾಯಿಗಳೂ ಆಗಿದ್ದ ನರಹರಿ ಪಾರೀಖ್ ಮತ್ತು ಮೋಹನಲಾಲ್ ಪಂಡ್ಯರೊಂದಿಗೆ ಪಟೇಲರು ಹಳ್ಳಿಹಳ್ಳಿ ಪ್ರವಾಸ ಕೈಗೊಂಡು, ಗ್ರಾಮಸ್ಥರ ತೊಂದರೆಗಳನ್ನು ಪರಿಶೀಲಿಸಿ, ರಾಜ್ಯವ್ಯಾಪಿ ಆಂದೋಳನದಲ್ಲಿ ಅವರೆಲ್ಲರ ಬೆಂಬಲವನ್ನು ಬೇಡಿದರು.
  • ರಾಜ್ಯದ ಎಲ್ಲೆಡೆಗಳಲ್ಲಿ ಹಿಂದೂ, ಮುಸ್ಲಿಂ ಎನ್ನದೆ, ಬಹುತೇಕ ಪ್ರತಿಯೊಬ್ಬರೂ ಪಟೇಲರ ಪರಿಶ್ರಮ ಮತ್ತು ನಾಯಕತ್ವವನ್ನು ಒಪ್ಪಿಕೊಂಡರು. ಪಟೇಲರು ಈ ಹೋರಾಟವು ಸಂಪೂರ್ಣ ಅಹಿಂಸಾತ್ಮಕವಾಗಿದ್ದು, ಹಳ್ಳಿಗರು ಒಗ್ಗಟ್ಟನ್ನು ಮುರಿಯಬಾರದೆಂದು ಸಾರಿಹೇಳಿದರು. ಪಟೇಲರ ಈ ಕಾರ್ಯದಲ್ಲಿ ರಾಷ್ಟ್ರೀಯವಾದಿಗಳಾದ ಅಬ್ಬಾಸ್ ತ್ಯಾಬ್ಜೀ ಮತ್ತು ಅಹಮದಾಬಾದಿನ ಸಾರಾಭಾಯ್ ಕೈಗೂಡಿಸಿದರು.
  • ಹಳ್ಳಿಗರ ಕರನಿರಾಕರಣೆಯ ಸತ್ಯಾಗ್ರಹವನ್ನು ಮುರಿಯಲು ಸರಕಾರ ಪೋಲಿಸ್ ಪಡೆಗಳನ್ನು ಕಳುಹಿಸಿ, ಜಮೀನು, ಸಾಕುಪ್ರಾಣಿಗಳನ್ನೊಳಗೊಂಡು, ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಪ್ರಾರಂಭಿಸಿತು. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಗ್ರಾಮಸ್ಥರು, ಬಂಧಿತರಾದರೂ ಹಳ್ಳಿಗರ ಕಡೆಯಿಂದ ಹಿಂಸಾತ್ಮಕ ಪ್ರತಿಕ್ರಿಯೆ ಇಲ್ಲವೇಇಲ್ಲವೆನ್ನುವಷ್ಟು ಅಪರೂಪವಾಗಿತ್ತು. ಸತ್ಯಾಗ್ರಹಿಗಳಿಗೆ ರಾಜ್ಯಾದ್ಯಂತ ಜನಸಾಮಾನ್ಯರು, ಆಹಾರ, ಬಟ್ಟೆ ಮತ್ತು ಇತರ ಅವಶ್ಯಕತೆಗಳನ್ನು ಪೂರೈಸಿ, ಬೆಂಬಲ ಸೂಚಿಸಿದರು.ತೆರಿಗೆ ಸಲ್ಲಿಸಿದ ,ಸರಕಾರಕ್ಕೆ ಬೆಂಬಲವಿತ್ತ ಹಳ್ಳಿಗಳಿಗೆ ಗುಜರಾತಿನ ಜನ ಬಹಿಷ್ಕಾರ ಹಾಕಿದರು.
  • ಈ ಪ್ರತಿಭಟನೆಗೆ ಭಾರತದಾದ್ಯಂತ ಸಹಾನುಭೂತಿ ವ್ಯಕ್ತವಾದರೂ, ಈ ಪ್ರತಿಭಟನೆ ಸ್ಥಳೀಯ ಸಮಸ್ಯೆಗಾಗಿತ್ತೇ ಹೊರತು, ಭಾರತದ ಸ್ವಾತಂತ್ರ್ಯಕ್ಕಾಗಿ ಆಗಿರಲಿಲ್ಲ ಎಂಬುದನ್ನು ಗಮನಿಸಬೇಕು. ೧೯೧೯ರಲ್ಲಿ ಸರಕಾರ ಮಣಿದು, ಕರವನ್ನು ಮುಂದೂಡಿದ್ದಷ್ಟೇ ಅಲ್ಲ, ಅದರ ದರವನ್ನೂ ಕಡಿಮೆ ಮಾಡುವುದರೊಂದಿಗೆ ಈ ಹೋರಾಟ ಮುಕ್ತಾಯ ಕಂಡಿತು.

ಸಾಮಾಜಿಕ ಹೋರಾಟಗಳು[ಸಂಪೊಲಿಪುಲೆ]

  • ಪಟೇಲರು ಈ ಸತ್ಯಾಗ್ರಹದಿಂದ ಮಹಾನಾಯಕ ಎಂದು ಗುಜರಾತಿ ಜನಮನ್ನಣೆಯನ್ನು ಪಡೆದು, ಭಾರತದಾದ್ಯಂತ ರಾಜಕೀಯ ಧುರೀಣರ ಮೆಚ್ಚುಗೆಯನ್ನು ಗಳಿಸಿದರು.೧೯೧೯ ರಿಂದ ೧೯೨೮ರವರೆಗೆ, ಪಟೇಲರು, ಅಸ್ಪ್ರಶ್ಯತೆ, ಮದ್ಯಪಾನ, ಬಡತನ ಹಾಗೂ ಅಜ್ಙಾನದ ವಿರುದ್ಧ ವ್ಯಾಪಕ ಚಳುವಳಿ ನಡೆಸಿದರು. ೧೯೨೨ರಲ್ಲಿ ಅಹಮದಾಬಾದಿನ ಮುನಿಸಿಪಾಲಿಟಿಯ ಅಧ್ಯಕ್ಷರಾಗಿ ಚುನಾಯಿತರಾದರು.
  • ಇದರಿಂದ ಪಟೇಲರಿಗೆ ಸಾರ್ವಜನಿಕ ಸೇವೆಯೊಂದಿಗೆ ರಾಜನೀತಿ ಮತ್ತು ಆಡಳಿತರಂಗಗಳಲ್ಲಿ ಹೆಚ್ಚಿನ ಅನುಭವ ಪಡೆದುಕೊಳ್ಳುವ ಅವಕಾಶ ದೊರಕಿತು. ಇವರ ಆಡಳಿತಾವಧಿಯಲ್ಲಿ ಅಹಮದಾಬಾದಿಗೆ ವಿದ್ಯುತ್ ಸರಬರಾಜು, ಚರಂಡಿ ಹಾಗೂ ನೈರ್ಮಲ್ಯ ವ್ಯವಸ್ಥೆ, ಹಾಗೂ ಶಿಕ್ಷಣ ವ್ಯವಸ್ಥೆಗಳಲ್ಲಿ ಭಾರೀ ಸುಧಾರಣೆಗಳನ್ನು ತಂದರು. ಹಿಂದೂ-ಮುಸ್ಲಿಮ್ ವಿವಾದದಂತಹ ನಾಜೂಕು ವಿಷಯಗಳನ್ನೂ ಕೈಗೆತ್ತಿಕೊಂಡು, ನಗರದ ಬಹುತೇಕ ಜನಸಂಖ್ಯೆಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರಗಳನ್ನು ಕೈಗೊಂಡರು.
  • ೧೯೨೮ರಲ್ಲಿ ಬಾರ್ಡೋಲಿಯು ದುರವಸ್ಥೆಗೀಡಾಯಿತು. ಗುಜರಾತಿನ ಬಹುತೇಕ ಭಾಗಗಳು ಕ್ಷಾಮದಿಂದ ತತ್ತರಿಸುವುದರೊಂದಿಗೇ, ಸರಕಾರ ಕಂದಾಯವನ್ನು ಹೆಚ್ಚು ಮಾಡಿತು. ಇದರ ವಿರುದ್ಧವಾಗಿ ಪಟೇಲರು ಜನಸಮೂಹವನ್ನು ಒಟ್ಟುಗೂಡಿಸಿ ನಡೆಸಿದ ಪ್ರತಿಭಟನೆ ದೇಶದಲ್ಲೆಲ್ಲ ಹೆಸರುಮಾಡಿತು.
  • ಖೇಡಾ ಸತ್ಯಾಗ್ರಹಕ್ಕಿಂತ ಉಗ್ರವಾಗಿದ್ದ ಈ ಪ್ರತಿಭಟನೆಗೆ ಬೆಂಬಲವಾಗಿ ಗುಜರಾತಿನ ಅನೇಕ ಕಡೆಗಳಲ್ಲಿ ಜನರು ಸತ್ಯಾಗ್ರಹ ಹೂಡಿದರು. ಈ ಎರಡೂ ಹೋರಾಟಗಳು ಮುಗಿದ ನಂತರ ಪಟೇಲರು, ಜನಸಾಮಾನ್ಯರು ಕಳೆದುಕೊಂಡಿದ್ದ ಭೂಮಿಕಾಣಿ ಹಾಗೂ ಆಸ್ತಿಪಾಸ್ತಿಗಳನ್ನು ಮತ್ತೆ ಅವರಿಗೆ ವಾಪಸು ದೊರಕಿಸಿಕೊಡಲು ಬಹಳಷ್ಟು ಪರಿಶ್ರಮಪಟ್ಟರು. ಬಾರ್ಡೋಲಿಯ ಸತ್ಯಾಗ್ರಹದಿಂದ ಪಟೇಲರಿಗೆ ಸರದಾರ್ ಎಂಬ ಬಿರುದು ಪ್ರಾಪ್ತವಾಯಿತು. ಗುಜರಾತಿನ ಲಕ್ಷಾಂತರ ಜನರಿಗೆ ಪಟೇಲರು ಆರಾಧ್ಯದೈವವಾದರು.

ಭಾರತದ ವಿಭಜನೆ[ಸಂಪೊಲಿಪುಲೆ]

  • ಜಿನ್ನಾರ ನಾಯಕತ್ವದಲ್ಲಿ ದಿನೇದಿನೇ ಹೆಚ್ಚುತ್ತಿದ್ದ ಮುಸ್ಲಿಮ್ ಪ್ರತ್ಯೇಕತಾ ಬೇಡಿಕೆಯಿಂದ ಭಾರತದ ವಿಭಜನೆ ಅನಿವಾರ್ಯ ಎಂಬ ನಿರ್ಣಯಕ್ಕೆ ಬಂದ ಮೊದಮೊದಲ ಕಾಂಗ್ರೆಸ್ ನಾಯಕರುಗಳಲ್ಲಿ ಪಟೇಲರು ಒಬ್ಬರಾಗಿದ್ದರು. ಕಾಂಗ್ರೆಸ್ ಮತ್ತು ಮುಸ್ಲಿಮ್ ಲೀಗ್ ಮಧ್ಯೆ ಸಂಧಾನದ ಪ್ರಯತ್ನಗಳನ್ನು ವಿಫಲಗೊಳಿಸಿ, ಜಿನ್ನಾ ತನ್ನ ಹಿಂಬಾಲಕರನ್ನು ಹಿಂಸಾತ್ಮಕ ಪ್ರತಿಭಟನೆಗೆ ಪ್ರಚೋದಿಸುತ್ತಿದ್ದದ್ದು ಪಟೇಲರನ್ನು ತೀವ್ರ ಸಂತಾಪಕ್ಕೆ ಈಡುಮಾಡಿತು.( ಜಿನ್ನಾ ಕರೆ ಕೊಟ್ಟ ಡೈರೆಕ್ಟ್ ಆಕ್ಷನ್ ಡೇ ಎಂಬ ಅಂದೋಳನದಲ್ಲಿ ೫೦೦೦ಕ್ಕೂ (?) ಹೆಚ್ಚು ಮಂದಿ ಕೊಲೆಗೀಡಾದರು.:- the death toll is estimated at between 500,000 to 1 million people: ಇಂಗ್ಲಿಷ್ ತಾಣ ನೋಡಿ).
  • ಆದರೂ ಜಿನ್ನಾ ಮುಸ್ಲಿಮರ ಜನಪ್ರಿಯ ನಾಯಕನಾಗಿರುವುದರಿಂದ, ರಾಷ್ಟ್ರೀಯವಾದಿಗಳೊಂದಿಗಿನ ಅವರ ಭಿನ್ನಾಭಿಪ್ರಾಯಗಳು, ಬೃಹತ್ ಹಿಂದೂ ಮುಸ್ಲಿಮ್ ದಂಗೆಯ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಗಳ ಅರಿವೂ ಅವರಿಗಿತ್ತು. ನೆಹರು ಮತ್ತಿತರರು ವಿಭಜನೆಯ ಸಾಧ್ಯತೆಯನ್ನು ಒಪ್ಪಿದ ಮೇಲೆ , ಈ ವಿಷಯದಲ್ಲಿ ಅತ್ಯಂತ ದುಃಖಿಗಳಾಗಿದ್ದ ಗಾಂಧಿಯನ್ನು ವಿಭಜನೆಯ ಅನಿವಾರ್ಯತೆಯ ಬಗ್ಯೆ ಒಪ್ಪಿಸುವ ಕಾರ್ಯವನ್ನು ಪಟೇಲರು ವಹಿಸಿಕೊಂಡರು.

ವಿಭಜನೆಯ ನಂತರದ ಭಾರತ[ಸಂಪೊಲಿಪುಲೆ]

  • ಪಾರ್ಟಿಷನ್ ಕೌನ್ಸಿಲ್ಲಿನ, ಭಾರತದ ಪರವಾದ ಸದಸ್ಯರಾಗಿ ಪಟೇಲರು ಸರಕಾರಿ ಆಡಳಿತ ಯಂತ್ರಗಳ, ಆಸ್ತಿಪಾಸ್ತಿಗಳ ಸೂಕ್ತಹಂಚಿಕೆಯ ಮೇಲುಸ್ತುವಾರಿ ಮಾಡಿದರು ಭಾರತಕ್ಕಿಂತ ಗಾತ್ರದಲ್ಲೂ, ಜನಸಂಖ್ಯೆಯಲ್ಲೂ ಚಿಕ್ಕದಾಗಿದ್ದ ಪಾಕಿಸ್ತಾನಕ್ಕೆ, ಅದರ ಗಾತ್ರಕ್ಕನುಗುಣವಾಗಿ ಸಿಗಬೇಕಾಗಿದ್ದ ಸಂಪನ್ಮೂಲಗಳ ಭಾಗಕ್ಕಿಂತ ಹೆಚ್ಚಾಗಿ ಜಿನ್ನಾ ಪಡೆದುಕೊಳ್ಳದಂತೆ ಪಟೇಲರು ಎಚ್ಚರ ವಹಿಸಿದರು.
  • ನೆಹರೂ ಮತ್ತು ಪಟೇಲರು ಜಂಟಿಯಾಗಿ ಕೇಂದ್ರ ಮಂತ್ರಿಮಂಡಲವನ್ನು ನಿರ್ಣಯಿಸಿ, ಪಟೇಲರು ಉಪಪ್ರಧಾನಿಯಾಗಿ ಗೃಹಖಾತೆಯನ್ನು ವಹಿಸಿಕೊಂಡರು. ತಮ್ಮ ಎಪ್ಪತ್ತೆರಡನೆಯ ವಯಸ್ಸಿನಲ್ಲಿ , ೫೬೫ ರಾಜ ಸಂಸ್ಥಾನಗಳನ್ನು ಭಾರತದಲ್ಲಿ ವಿಲೀನಗೊಳಿಸಿ, ಅಲ್ಲಿ ಪ್ರಜಾಪ್ರಭುತ್ವವನ್ನು ಜಾರಿಗೊಳಿಸುವ, ದೇಶದ ರಕ್ಷಣೆಯ ವ್ಯವಸ್ಥೆಯನ್ನು ರೂಪಿಸುವ, ಹಾಗೂ ಭಾರತವನ್ನು ಒಗ್ಗಟ್ಟಾದ ದೇಶವನ್ನಾಗಿ ಕಟ್ಟುವ ಮಹತ್ತರ ಜವಾಬ್ದಾರಿಯನ್ನು ಪಟೇಲರು ಹೊತ್ತುಕೊಂಡರು.
  • ಅಷ್ಟೇ ಅಲ್ಲ, ಅಧಿಕಾರದ ವಿಕೇಂದ್ರೀಕರಣ, ಧಾರ್ಮಿಕ ಸಮಾನತೆ ಮತ್ತು ಸ್ವಾತಂತ್ರ್ಯ , ಆಸ್ತಿ ಹಕ್ಕು ಇತ್ಯಾದಿ ವಿಷಯಗಳನ್ನು ವಿಷದೀಕರಿಸಿ, ಭಾರತದ ಸಂವಿಧಾನದ ರಚನೆಯಲ್ಲಿ ಮಹತ್ವದ ಕೊಡುಗೆ ನೀಡಿದರು. ರಾಜ-ಮಹಾರಾಜ-ಸಾಮಂತರುಗಳಿಂದ ತುಂಬಿದ್ದ ಬ್ರಿಟಿಷ್ ಇಂಡಿಯವನ್ನು ಇಂಡಿಯವನ್ನಾಗಿಸಲು ಸಾಮ ಭೇದ ದಾನ ದಂಡ ಇವುಗಳನ್ನು ಸಂದರ್ಭಕ್ಕೆ ಸರಿಯಾಗಿ ಬಳಸಿದ ಹಿರಿಮೆ ಪಟೇಲರದ್ದು.
  • ಪ್ರಜೆಗಳ ಆಶೋತ್ತರಗಳಿಗೆ ಹೊಂದಿಕೊಂಡಿದ್ದ ಮೈಸೂರು, ಇಂದೋರ್ ಮುಂತಾದ ಪ್ರಾಂತ್ಯಗಳ ಜೊತೆ ಗೌರವದಿಂದ ವರ್ತಿಸಿದರು. ಸೂಕ್ಷ್ಮ ವಾದ ಜಾಗಗಳಿಗೆ (ತಿರುವಾಂಕೂರು ಮತ್ತಿತರೆಡೆ) ವಿ. ಪಿ. ಮೆನನ್ ರಂತಹ ಪ್ರತಿನಿಧಿಗಳನ್ನು ಕಳಿಸಿ ಭಾರತದಲ್ಲಿ ತಮ್ಮ ಸಂಸ್ಥಾನವನ್ನು ಸೇರಿಸುವಂತೆ ಆಯಾ ರಾಜರನ್ನು ಒಲಿಸಿದರು.
  • ಯುದ್ಧ ಮಾಡಲು ಹಿಂಜರಿಯದ, ಆದರೆ ನೇರಯುದ್ಧಕ್ಕೆ ಸಿದ್ಧರಿಲ್ಲದ ರಾಜರ ಜೊತೆ ಮಾತನಾಡುವಾಗ ಮಿಲಿಟರಿ ವ್ಯವಹಾರಗಳ ಡೈರೆಕ್ಟರ್ ಜನರಲ್ ಸ್ಯಾಮ್ ಮಾಣಿಕ್ ಶಾರನ್ನು ಜೊತೆಯಾಗಿಟ್ಟುಕೊಂಡು ಹೋಗುತ್ತಿದ್ದರು. ಜುನಾಗಢ್, ಜಮ್ಮು-ಕಾಶ್ಮೀರ, ಹೈದರಾಬಾದ್ ಈ ಮೂರು ರಾಜ್ಯಗಳ ರಾಜರು ಮಾತ್ರ ಪಟೇಲರ ಚಾಕಚಕ್ಯತೆಗೆ ಮತ್ತು ಭಾರತದ ಒಗ್ಗಟ್ಟಿಗೆ ಸವಾಲು ಹಾಕಿದಾಗ, ಸೈನ್ಯವನ್ನು ಕಳಿಸಿ, ರಾಜ್ಯಗಳನ್ನು ಆಕ್ರಮಿಸಿ, ಆಯಾ ರಾಜ್ಯಗಳು ಮತ್ತು ಪ್ರಜೆಗಳನ್ನು ಭಾರತದ ಭಾಗವಾಗಿಸಿದರು.

ಭಾರತದ ರಾಜಕೀಯ ಏಕೀಕರಣ[ಸಂಪೊಲಿಪುಲೆ]

  • ೫೬೫ ಅರೆ-ಸ್ವತಂತ್ರ ಸಂಸ್ಥಾನಗಳಲ್ಲಿ ಹಂಚಿಹೋಗಿದ್ದ ಭಾರತವನ್ನು ಒಗ್ಗೂಡಿಸುವ ಮಹತ್ಕಾರ್ಯಕ್ಕೆ ಪಟೇಲರೇ ಸೂಕ್ತ ವ್ಯಕ್ತಿ ಎಂದು ಕಾಂಗ್ರೆಸ್ ಪಕ್ಷದ , ಮೌಂಟ್ ಬ್ಯಾಟನ್ನರ ಹಾಗೂ ಹಿರಿಯ ಬ್ರಿಟಿಷ್ ಅಧಿಕಾರಿಗಳ ಒಮ್ಮತದ ಅಭಿಪ್ರಾಯವಾಗಿತ್ತು. “ರಾಜ್ಯಗಳ ಈ ಸಮಸ್ಯೆ ಎಷ್ಟು ಸಂಕೀರ್ಣವಾಗಿದೆಯೆಂದರೆ ನೀವೊಬ್ಬರೇ ಅದನ್ನು ಬಗೆಹರಿಸಲು ಸಮರ್ಥರು” ಎಂದು ಗಾಂಧೀಜಿ ಕೂಡಾ ಪಟೇಲರಿಗೆ ಹೇಳಿದ್ದರು.
  • ಈ ಗುರುತರ ಕಾರ್ಯವನ್ನು ಯಶಸ್ವಿಯಾಗಿ ಕೈಗೂಡಿಸುವ ಮನಃ ಸ್ಥೈರ್ಯ , ಚಾಣಾಕ್ಷತನ ಹಾಗೂ ಅಚಲತೆ ಇದ್ದವರಾದ ಪಟೇಲರು, ರಾಷ್ಟ್ರಹಿತಕ್ಕಾಗಿ ಮುಂದೆ ನಿಂತು ಸರ್ಕಾರದ ನಿರ್ಧಾರಗಳನ್ನು ಜಾರಿಮಾಡುವುದಕ್ಕೆ ತಯಾರಿದ್ದರೂ, ಸಂಸ್ಥಾನಿಕರೊಂದಿಗೆ ಸಂಧಾನ ನಡೆಸಲು ಬೇಕಾದ ಅನುಭವವನ್ನೂ, ಮುತ್ಸದ್ದಿತನವನ್ನೂ ಪಡೆದುಕೋಡಿದ್ದರು.
  • ೧೯೪೭ರ ಮೇ ೬ರಂದು ಪಟೇಲರು ರಾಜರುಗಳ ಜೊತೆ ವಿಲೀನದ ಮಾತುಕತೆ ಪ್ರಾರಂಭಿಸಿದರು. ಈ ಮಾತುಕತೆಯ ಉದ್ದೇಶ ಈ ರಾಜರು ಭವಿಷ್ಯದ ಭಾರತ ಸರ್ಕಾರದೊಂದಿಗೆ ಸಹಕಾರ ಕೊಡುವುದಕ್ಕೂ ಹಾಗೂ ಮುಂದೆ ಉಂಟಾಗಬಹುದಾದ ಘರ್ಷಣೆಗಳನ್ನು ಈಗಲೇ ಚಿವುಟಿಹಾಕುವುದಾಗಿತ್ತು.
  • ಬಹಳಷ್ಟು ಸಂಸ್ಥಾನಿಕ ರಾಜರುಗಳನ್ನು ತಮ್ಮ ಮನೆಗೆ ಆಹ್ವಾನಿಸಿ ಭೋಜನ, ಅಥವಾ ಚಹಾ ಸತ್ಕಾರ ಏರ್ಪಡಿಸಿದ ಪಟೇಲರು, ಈ ಸಾಮಾಜಿಕ ಹಾಗೂ ಅನಧಿಕೃತ ಭೇಟಿಗಳ ಮೂಲಕ ಅವರನ್ನು ವಿಲೀನದ ಪ್ರಕ್ರಿಯೆಯಲ್ಲಿ ತೊಡಗಿಸಿದರು.ಕಾಂಗ್ರೆಸ್ ಹಾಗೂ ಈ ರಾಜಕುಮಾರರಲ್ಲಿ ಮೂಲಭೂತವಾದ ಯಾವುದೇ ಚಕಮಕಿಯಿಲ್ಲ ಎಂದು ಪಟೇಲರು ಸ್ಪಷ್ಟಪಡಿಸಿದರೂ , ೧೯೪೭ ಆಗಸ್ಟ್ ೧೫ರ ಒಳಗಾಗಿ ಭಾರತದಲ್ಲಿ ವಿಲೀನವಾಗುವಂತೆ ಅವರನ್ನು ಆಗ್ರಹಿಸಿದರು.
  • ತಮ್ಮ ಪ್ರಜೆಗಳ ಭವಿಷ್ಯದ ಹಿತಕ್ಕಾಗಿ ರಾಜ್ಯವನ್ನು ಭಾರತಕ್ಕೆ ಬಿಟ್ಟುಕೊಡುವಂತೆಯೂ, ಭಾರತದಿಂದ ಸ್ವತಂತ್ರವಾಗಿ ರಾಜ್ಯಭಾರ ಮಾಡುವುದರ , ಅದರಲ್ಲೂ ಮುಖ್ಯವಾಗಿ ಹೆಚ್ಚುತ್ತಿದ್ದ ಪ್ರತಿಭಟನೆಯ ವಿರುದ್ಧ, ನಿರರ್ಥಕತೆಯನ್ನೂ ಈ ೫೬೫ ರಾಜರುಗಳಿಗೆ ಮನದಟ್ಟು ಮಾಡಿಕೊಟ್ಟರು. ವಿಲೀನವಾದವರ ಪೀಳಿಗೆಯವರಿಗೆ ರಾಜಧನದ ಆಶ್ವಾಸನೆಯನ್ನೂ ಅವರು ನೀಡಿದರು. ಬರಿಯ ಮೂರು, ಕಾಶ್ಮೀರ, ಹೈದರಾಬಾದು ಹಾಗೂ ಜುನಾಘಢ, ರಾಜ್ಯಗಳನ್ನು ಹೊರತುಪಡಿಸಿ, ಬಾಕಿ ಎಲ್ಲಾ ಸಂಸ್ಥಾನಗಳೂ ವಿಲೀನಕ್ಕೆ ಒಪ್ಪಿದವು.
  • ತಮ್ಮ ಸ್ವಂತ ರಾಜ್ಯ ಗುಜರಾತಿನಲ್ಲಿದ್ದ ಜುನಾಘಡ ಸಂಸ್ಥಾನ ಪಟೇಲರಿಗೆ ಸಹಜವಾಗಿಯೇ ಮಹತ್ವದ್ದಾಗಿತ್ತು. ಅಲ್ಲಿಯ ನವಾಬರ ಮೇಲೆ ಪಾಕಿಸ್ತಾನ ಸೇರುವಂತೆ ಸರ್ ಶಾ ನವಾಜ್ ಭುಟ್ಟೋ ಒತ್ತಡ ಹೇರಿದ್ದರು. ಜುನಾಗಡ ಪಾಕಿಸ್ತಾನದಿಂದ ಸಾಕಷ್ಟು ದೂರವಿದ್ದದ್ದಷ್ಟೇ ಅಲ್ಲ ಅಲ್ಲಿಯ ಜನಸಂಖ್ಯೆಯ ಶೇಕಡಾ ೮೦ ಹಿಂದೂಗಳಾಗಿದ್ದರು. ಪಟೇಲರು ಮುತ್ಸದ್ದಿತನದೊಡನೆ, ಬಲಪ್ರದರ್ಶನವನ್ನೂ ಮಾಡಿ ಪಾಕಿಸ್ತಾನ ಜುನಾಘಡದಿಂದ ದೂರವಿರುವಂತೆಯೂ, ಹಾಗೂ ಜುನಾಘಡವು ಭಾರತದೊಂದಿಗೆ ವಿಲೀನವಾಗಬೇಕೆಂದೂ ಒತ್ತಡ ಹಾಕಿದರು. *ಇದರೊಂದಿಗೆ ಸೇನೆಯ ತುಕಡಿಗಳನ್ನು ಜುನಾಘಡದ ಮೂರು ಪ್ರದೇಶಗಳಿಗೆ ಕಳುಹಿಸಿ ತಮ್ಮ ಧೃಢನಿರ್ಧಾರವನ್ನು ಪ್ರಕಟಪಡಿಸಿದರು. ವ್ಯಾಪಕ ಪ್ರತಿಭಟನೆಯ ನಂತರ ಜನಪರ ಸರ್ಕಾರ (ಆರ್ಜೀ ಹುಕುಮತ್) ರಚನೆಯಾದ ಮೇಲೆ ಭುಟ್ಟೋ ಮತ್ತು ನವಾಬ ಇಬ್ಬರೂ ಪಾಕಿಸ್ತಾನಕ್ಕೆ ಪಲಾಯನ ಮಾಡಿದರು. ಪಟೇಲರ ಆದೇಶದ ಮೇರೆ ಭಾರತೀಯ ಸೇನೆ ಹಾಗೂ ಪೋಲೀಸ್ ಪಡೆಗಳು ಜುನಾಘಡವನ್ನು ಪ್ರವೇಶಿಸಿದವು.
  • ಮುಂದೆ ನಡೆದ ಜನಮತಗಣನೆಯಲ್ಲಿ ಶೇಕಡಾ ೯೯.೫ ಮಂದಿ ಭಾರತದೊಂದಿಗೆ ವಿಲೀನದ ಪರವಾಗಿ ಮತವಿತ್ತರು. ಇಂದಿನ ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರದ ಭಾಗಗಳನ್ನೊಳಗೊಂಡ ಹೈದರಾಬಾದ್ ಭಾರತದ ಸಂಸ್ಥಾನಗಳಲ್ಲಿಯೇ ಅತಿ ದೊಡ್ಡದಾಗಿತ್ತು. ಅಲ್ಲಿನ ನಿಜಾಮ ಮುಸ್ಲಿಮರಾಗಿದ್ದರೂ ಜನಸಂಖ್ಯೆಯ ಶೇಕಡಾ ೮೦ ಹಿಂದೂಗಳಾಗಿದ್ದರು.
  • ಜಿನ್ನಾ ಮೊದಲಾದ ಪಾಕಿಸ್ತಾನ ನಾಯಕರು ಹಾಗೂ ಬ್ರಿಟೀಷ್ ರ ಬೆಂಬಲದಿಂದ, ಹೈದರಾಬಾದ್ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ನಿಜಾಮ ಘೋಷಿಸಿದ. ಆತನ ಸೇನೆಗೆ ಅತ್ಯಾಧುನಿಕ ಸಿಡ್ನಿ ಕಾಟನ್ ಬಂದೂಕುಗಳು, ಮದ್ದುಗುಂಡುಗಳನ್ನು ಮತ್ತು ತರಬೇತಿಯನ್ನು ಬ್ರಿಟೀಷ್ ರು ನೀಡಿದರು.ಕಾಸೀಂ ರಜ್ವಿಯಂಬ ಮತಾಂಧ ಮತ್ತು ಉಗ್ರವಾದಿಯ ಮುಂದಾಳುತ್ವದಲ್ಲಿ ಸಾವಿರಾರು ಜನ ರಜಾಕಾರರು, ಹೈದರಾಬಾದ್ ಸಂಸ್ಥಾನದಲ್ಲಿ ಜನಸಾಮಾನ್ಯರ ಮೇಲೆ ಆಕ್ರಮಣ ನೆಡೆಸಿದರು.
  • ಮಹಿಳೆಯರ ಮಾನಭಂಗ, ಮಕ್ಕಳ ಹತ್ಯೆ, ಜನರ ಹತ್ಯೆ ಇವು ಸಾವಿರಾರು ಕಡೆ ನೆಡೆದವು. ಸ್ವಾಮಿ ರಮಾನಂದತೀರ್ಥರ ನೇತೃತ್ವದಲ್ಲಿ ಹೈದರಾಬಾದ್ ಪ್ರಾಂತ್ಯ ವಿಮೋಚನಾ ಹೋರಾಟ ನೆಡೆಯಿತು. ಕರ್ನಾಟಕದ ಮುಂಡರಗಿಯ ಶಿಬಿರಕ್ಕೆ ಕೇಂದ್ರ ಮಂತ್ರಿ ಗಾಡ್ಗೀಳರನ್ನು ಕಳುಹಿಸಿದ ಪಟೇಲ್ ರು, ಈ ಹೋರಾಟಕ್ಕೆ ಬೆಂಬಲ ನೀಡಿ ಪ್ರೋತ್ಸಾಹಿಸಿದರು.
  • ಯುದ್ಧ ಭೀತಿಯಿಂದ ಹತಾಶರಾಗಿದ್ದ ಮೌಂಟ್ ಬ್ಯಾಟನ್ನರ ಪ್ರಯತ್ನದಿಂದ ತಟಸ್ಥ ಒಪ್ಪಂದವಾದರೂ, ನಿಜಾಮ ತನ್ನ ನಿಲುವನ್ನು ಬದಲಾಯಿಸಿ, ಈ ಒಪ್ಪಂದವನ್ನು ತಿರಸ್ಕರಿಸಿದ. ವಿಶ್ವಸಂಸ್ಥೆಗೆ ಈ ವಿವಾದವನ್ನು ಒಪ್ಪಿಸುವ ಕುತಂತ್ರ ಅವನದಾಗಿತ್ತು. ೧೯೪೮ರ ಸೆಪ್ಟೆಂಬರಿನಲ್ಲಿ ಪಟೇಲರು ಭಾರತ ಇನ್ನು ಕಾಯಲಾಗದು ಎಂದು ರಾಜಾಜಿಯವರನ್ನು ಒಪ್ಪಿಸಿ, ಹೈದರಾಬಾದನ್ನು ವಶಕ್ಕೆ ತೆಗೆದುಕೊಳ್ಳಲು ಭಾರತದ ಸೇನೆಯನ್ನು ಕಳುಹಿಸಿದರು.
  • ಆಪರೇಷನ್ ಪೋಲೋ ಎಂಬ ಈ ಕಾರ್ಯಾಚರಣೆಯಲ್ಲಿ ಸಾವಿರಾರು ರಜಾಕಾರರು ಕೊಲ್ಲಲ್ಪಟ್ಟರು. ೧೯೪೮ ಸೆಪ್ಟೆ೦ಬರ್ ೧೭ ರಂದು ಈಗಿನ ಬೀದರ್ ಜಿಲ್ಲೆಯ ಹುಮುನಾಬಾದಿನಲ್ಲಿ ನಿಜಾಮರ ಸೈನ್ಯ ಶರಣಾಯಿತು. ಹೈದರಾಬಾದು ಪ್ರಾ೦ತ್ಯ ಸುರಕ್ಷಿತವಾಗಿ ಭಾರತದ ಭಾಗವಾಯಿತು. ಕೇವಲ ಎರಡುದಿನವಷ್ಟೇ ನಡೆದ ಕಾರ್ಯಚರಣೆಯನ್ನು, ಭಾರತ ಸರಕಾರದ ದಾಖಲೆಗಳಲ್ಲಿ ಪೋಲೀಸ್ ಕಾರ್ಯಚರಣೆಯೆ೦ದು ಕರೆಯಲಾಗಿದೆ.
  • ನಿಜಾಮರ ಸೈನ್ಯದ ಸೈನ್ಯಾಧಿಕಾರಿ ಒಬ್ಬ ಬ್ರಿಟಿಷ್ ಆಗಿದ್ದನೆ೦ಬುವುದು ಇಲ್ಲಿ ಗಮನಾರ್ಹ. ಬಲಪ್ರಯೋಗದಿಂದ ಹೈದರಾಬಾದನ್ನು ವಶಪಡಿಸಿಕೊಂಡಲ್ಲಿ ಅದು ಹಿಂದೂ-ಮುಸ್ಲಿಮ್ ದಂಗೆಗಳಿಗೆ ಅವಕಾಶ ಕೊಡಬಹುದು ಎಂದು ಮೌಂಟ್ ಬ್ಯಾಟನ್ ಮತ್ತು ನೆಹರೂ ಶಂಕಿಸಿ ಹಿಂಜರಿದರೂ, ಪಟೇಲರು ಹೈದರಾಬಾದನ್ನು ಹಾಗೆಯೇ ಬಿಟ್ಟಲ್ಲಿ ಅದು ಭಾರತದ ಪ್ರತಿಷ್ಟೆಗೇ ಸವಾಲಾಗುವುದಷ್ಟೇ ಅಲ್ಲ, ಅದರಿಂದಾಗಿ ಹಿಂದೂಗಳಾಗಲೀ, ಮಸಲ್ಮಾನರಾಗಲೀ ಆ ರಾಜ್ಯದಲ್ಲಿ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು.
  • ಯಾವುದೇ ನಾಗರೀಕ ಪ್ರತಿಭಟನೆಯಿಲ್ಲದೇ ಯಶಸ್ವಿಯಾದ ಹೈದರಾಬಾದಿನ ವಿಲೀನವನ್ನು ಅನೇಕ ಭಾರತೀಯ ಮುಸ್ಲಿಮರು ಕೊಂಡಾಡಿದರು. ನಿಜಾಮರ ಮೇಲೆ ಸಂತಾಪವಿದ್ದರೂ, ಪಟೇಲರು ಅವರನ್ನು ರಾಜ್ಯದ ಅಲಂಕಾರಿಕ ಮುಖ್ಯಸ್ಥನನ್ನಾಗಿ ನೇಮಿಸಿದರು. ಮುಂದೆ ನಡೆದ ಮಾತುಕತೆಯಲ್ಲಿ ನಿಜಾಮರು ಪಟೇಲರನ್ನು ಕ್ಷಮಾಪಣೆ ಕೇಳಿದ್ದರಿಂದ ಪಟೇಲರು ದೊಡ್ಡ ಮನಸ್ಸಿನಿಂದ ವೈರವನ್ನು ತಮ್ಮ ಮನಸ್ಸಿನಿಂದ ತೆಗೆದುಹಾಕಿದರು.
  • ಹೈದರಾಬಾದು ಮತ್ತು ಜುನಾಘಡವನ್ನು ಭಾರತಕ್ಕೆ ಜಿನ್ನಾ ಬಿಟ್ಟುಕೊಟ್ಟರೆ , ಕಾಶ್ಮೀರ ಪಾಕಿಸ್ತಾನಕ್ಕೆ ಹೋಗುವುದಕ್ಕೆ ಅಡ್ಡಿಯಿಲ್ಲ ಎಂಬ ವಿಚಾರ ಪಟೇಲರ ಮನಸ್ಸಿನಲ್ಲಿ ಇರಬಹುದು ಎಂದು ರಾಜಮೋಹನ ಗಾಂಧಿ ಊಹಿಸುತ್ತಾರೆ. ತಮ್ಮ ಪಟೇಲ್ : ಎ ಲೈಫ್ ಎಂಬ ಪುಸ್ತಕದಲ್ಲಿ ಹೈದರಾಬಾದು ಮತ್ತು ಜುನಾಘಡವನ್ನು ಜಿನ್ನಾ ತಮ್ಮ ಸಂಘರ್ಷದ ಭಾಗವಾಗಬಯಸಿದ್ದರು ಎಂದು ಪ್ರತಿಪಾದಿಸುತ್ತಾರೆ.
  • ಭಾರತ ಹೈದರಾಬಾದು ಮತ್ತು ಜುನಾಘಡಗಳಲ್ಲಿ ಜನಮತಗಣನೆ ಮಾಡಬೇಕು ಎಂಬ ಬೇಡಿಕೆಯನ್ನಿಟ್ಟ ಜಿನ್ನಾರ ಉದ್ದೇಶ, ಮುಂದೆ ಇದೇ ತತ್ವವನ್ನು ಕಾಶ್ಮೀರಕ್ಕೂ ಅನ್ವಯಿಸಬೇಕಾಗುತ್ತದೆ ಹಾಗೂ ಜಿನ್ನಾರ ನಂಬಿದ್ದಂತೆ, ಅಲ್ಲಿಯ ಮುಸ್ಲಿಮ್ ಬಹುಸಂಖ್ಯಾತರು ಪಾಕಿಸ್ತಾನದ ಪರವಾಗಿ ಒಲವು ತೋರಿಸುವರು , ಎಂದಿತ್ತು ಎಂಬ ಅಭಿಪ್ರಾಯವೂ ಇದೆ.
  • ಜುನಾಘಡ ಭಾರತದ ಭಾಗವಾದ ಮೇಲೆ , ಅಲ್ಲಿಯ ಬಹಾವುದ್ದೀನ್ ಕಾಲೇಜಿನಲ್ಲಿ ಮಾತನಾಡುತ್ತಾ ಪಟೇಲರು ಹೇಳುತ್ತಾರೆ: " ಹೈದರಾಬಾದು ಎಚ್ಚರಿಕೆಯಿಂದಿಲ್ಲದಿದ್ದರೆ, ಜುನಾಘಡದ ಗತಿಯೇ ಅದಕ್ಕೂ ಆದೀತು. ಪಾಕಿಸ್ತಾನ ಕಾಶ್ಮೀರವನ್ನು ಜುನಾಘಡದ ವಿರುದ್ಧ ದಾಳವಾಗಿ ಉಪಯೋಗಿಸಲು ನೋಡಿದೆ. ಜನಾಭಿಪ್ರಾಯದ ತಳಹದಿಯ ಮೇಲೆ ಈ ವಿಷಯವನ್ನು ಬಗೆಹರಿಸಲು ನಾವು ಪಾಕಿಸ್ತಾನಕ್ಕೆ ಸೂಚಿಸಿದಾಗ, ಕಾಶ್ಮೀರಕ್ಕೆ ಈ ನೀತಿಯನ್ನು ಅನುಸರಿಸುವಂತೆ ಅವರಿಂದ ತಕ್ಷಣದ ಪ್ರತಿಕ್ರಿಯೆ ಬಂತು. ನೀವು ಹೈದರಾಬಾದಿನಲ್ಲಿ ಈ ನೀತಿಗೆ ಒಪ್ಪಿದರೆ ನಾವು ಕಾಶ್ಮೀರದಲ್ಲಿ ಒಪ್ಪಬಹುದು ಎಂದು ಅದಕ್ಕೆ ನಾವು ಜವಾಬು ಕೊಟ್ಟೆವು.”
  • ಭಾರತವನ್ನು ಒಟ್ಟುಗೂಡಿಸುವುದು ಸುಲಭದಕೆಲಸವೇನಾಗಿರಲಿಲ್ಲ. ಪಟೇಲರ ಗಣನೀಯಸೇವೆಯನ್ನು ಗಮನದಲ್ಲಿಟ್ಟು ಅವರನ್ನು ಭಾರತದ ಬಿಸ್ಮಾರ್ಕ್ ಎಂದು ಕರೆಯಲಾಗುತ್ತದೆ. ಪಟೇಲರು ಭಾರತದ ಕಾನ್ಸ್ಟಿಟ್ಯುಯೆಂಟ್ ಅಸೆಂಬ್ಲಿಯ ಹಿರಿಯ ಸದಸ್ಯರಾಗಿದ್ದರು.
  • ಭಾರತದ ಸಂವಿಧಾನದಲ್ಲಿ ನಾಗರಿಕ ಸ್ವಾತಂತ್ರ್ಯದ ರೂಪರೇಷೆಗಳನ್ನು ನಿರ್ಧರಿಸುವುದಕ್ಕಾಗಿ ರಚಿಸಲಾಗಿದ್ದ ಅನೇಕ ಮಹತ್ವದ ಸಮಿತಿಗಳ ನಾಯಕರಾಗಿದ್ದರು. ಸರಕಾರದ ರಕ್ಷಣಾತ್ಮಕ ಅಧಿಕಾರವಿರುವ, ವ್ಯಾಪಕ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಅವರು ಬೆಂಬಲ ನೀಡಿದರು. ರಾಷ್ಟ್ರೀಕೃತ ಸಿವಿಲ್ ಸರ್ವೀಸನ್ನು ಅವರು ಬಲವಾಗಿ ಬೆಂಬಲಿಸಿದ್ದಲ್ಲದೇ , ಆಸ್ತಿ ಹಕ್ಕು ಮತ್ತು ರಾಜಧನದ ಕಲಮುಗಳನ್ನೂ ಸೇರಿಸಿದರು.

=

  1. http://mhrd.gov.in/sites/upload_files/mhrd/files/Sardar%20Vallabbhai%20Patel.pdf